2022-23 ನೇ ಸಾಲಿನಲ್ಲಿ ಕೇರಳ ಸರಕಾರದ ವಿದ್ಯಾಭ್ಯಾಸ ಇಲಾಖೆಯು ನಡೆಸಿದ ಯು.ಎಸ್.ಎಸ್ ಪರೀಕ್ಷೆಯಲ್ಲಿ ನಮ್ಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿಯರಾದ ಅನಘಲಕ್ಷ್ಮಿ ಹಾಗೂ ಪ್ರಣ್ಯ ಎಮ್ ನಾಯಕ್ ತೇರ್ಗಡೆ ಹೊಂದಿ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿದ್ದಾರೆ.
ಶುಭ ಹಾರೈಕೆಗಳು.
2022-23 ನೇ ಸಾಲಿನಲ್ಲಿ ಕೇರಳ ಸರಕಾರದ ವಿದ್ಯಾಭ್ಯಾಸ ಇಲಾಖೆಯು ನಡೆಸಿದ ಯು.ಎಸ್.ಎಸ್ ಪರೀಕ್ಷೆಯಲ್ಲಿ ನಮ್ಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿಯರಾದ ಅನಘಲಕ್ಷ್ಮಿ ಹಾಗೂ ಪ್ರಣ್ಯ ಎಮ್ ನಾಯಕ್ ತೇರ್ಗಡೆ ಹೊಂದಿ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿದ್ದಾರೆ.
ಶುಭ ಹಾರೈಕೆಗಳು.
ಇತ್ತೀಚೆಗೆ ಚಾಯೋತ್ ನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿದ್ದಾರೆ. ಸಂಸ್ಕೃತ ಪ್ರಭಾಷಣಂನಲ್ಲಿ ಒಂಬತ್ತನೇ ತರಗತಿಯ ಅನಿರುದ್ಧ ಕೆ.ಎನ್, ಹಿಂದಿ ಉಪನ್ಯಾಸ ರಚನೆಯಲ್ಲಿ ಹತ್ತನೇ ತರಗತಿಯ ಸುದರ್ಶನ. ಕೆ, ಸಂಸ್ಕೃತ ಸಮಸ್ಯಾಪೂರಣದಲ್ಲಿ ಹತ್ತನೇ ತರಗತಿಯ ಅನಿಕೇತ್ ಸುಬ್ರಾಯ ಭಟ್, ಸಂಸ್ಕೃತ ಪ್ರಶ್ನೋತ್ತರಿಯಲ್ಲಿ ಹತ್ತನೇ ತರಗತಿಯ ವರದರಾಜ ಕೆ.ಆರ್, ಕನ್ನಡ ಕಂಠಪಾಠ ಮತ್ತು ಸಂಸ್ಕೃತ ಗಾನಾಲಾಪನಂ ಸ್ಪರ್ಧೆಗಳಲ್ಲಿ ಒಂಬತ್ತನೇ ತರಗತಿಯ ಅನ್ವಿತಾ ಟಿ. ಪ್ರಥಮ ಸ್ಥಾನ ಗಳಿಸಿ ಜನವರಿಯಲ್ಲಿ ಕಲ್ಲಿಕೋಟೆಯಲ್ಲಿ ರಾಜ್ಯ ಕಲೋತ್ಸವದಲ್ಲಿ ಸ್ಪರ್ಧಿಸಲಿದ್ದಾರೆ. ಉತ್ತಮ ಸಾಧನೆ ಪ್ರದರ್ಶಿಸಿದ ಈ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಶಾಂತಾ ಬಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ ಪಂಚಾಯತು ಸದಸ್ಯೆ ಶ್ರೀಮತಿ ಎಂ.ಶೈಲಜಾ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಅಬ್ಬಾಸ್ ಎಂ, ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯೆ ಶ್ರೀಮತಿ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಜಯಶ್ರೀ ಪಿ, ಕುಂಬಳೆ ಬಿಪಿಸಿ ಜಯರಾಮ್ ಜೆ, ಬದಿಯಡ್ಕ ಗ್ರಾಮ ಪಂಚಾಯತು ಪಿಇಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ, ಕುಂಬಳೆ ಉಪಜಿಲ್ಲಾ ಏಕ್ಟಿವಿಟಿ ಕಮಿಟಿಯ ಸಂಚಾಲಕ ಸುರೇಂದ್ರನ್ ಎಂ.ವಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲತಿ.ವೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಎಸ್.ನಾರಾಯಣ ಮತ್ತು ಮೋಹನ್ ಡಿ.ಎನ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಈಶ್ವರ ನಾಯಕ್, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಪ್ರಭಾರ ಪ್ರಾಂಶುಪಾಲ ಎಂ.ಸುಬ್ರಹ್ಮಣ್ಯನ್ ಉಪಸ್ಥಿತರಿದ್ದರು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆಯವರು ಧ್ವಜಾರೋಹಣಗೈದರು. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ಸ್ವಾಗತಿಸಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ್ ಎಂ.ಕೆ ಧನ್ಯವಾದ ಸಮರ್ಪಿಸಿದರು. ಶಾಲಾ ಶಿಕ್ಷಕ ವಿಶ್ವನಾಥ ಭಟ್ ಕಾರ್ಯಕ್ರಮ ನಿರೂಪಿಸಿದರು.
ಅಕ್ಟೋಬರ್ 21 ರಂದು ಸಮಾಜ ವಿಜ್ಞಾನ, ಗಣಿತ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸ್ಪರ್ಧೆಗಳು ಮತ್ತು ಅಕ್ಟೋಬರ್ 22 ರಂದು ವಿಜ್ಞಾನ ಮತ್ತು ವೃತ್ತಿಪರಿಚಯಕ್ಕೆ ಸಂಬಂಧಿಸಿದ ಸ್ಪರ್ಧೆಗಳು ಜರಗಲಿವೆ. ಕಾರ್ಯಕ್ರಮದಲ್ಲಿ ಕುಂಬಳೆ ಉಪಜಿಲ್ಲೆಯ ವಿವಿಧ ಸರಕಾರಿ, ಅನುದಾನಿತ ಮತ್ತು ಅನನುದಾನಿತ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಸ್ಪರ್ಧೆಗಳು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಹೈಯರ್ ಸೆಕೆಂಡರಿ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಜರಗುತ್ತಿವೆ. ಕುಂಬಳೆ ಉಪಜಿಲ್ಲೆಯ 117 ಶಾಲೆಗಳಿಂದ 3146 ಮಂದಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.
21.10.2022 ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆಯವರು ಧ್ವಜಾರೋಹಣಗೈಯಲಿದ್ದಾರೆ. ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಶಾಂತಾ ಬಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು ನೆರವೇರಿಸಲಿದ್ದಾರೆ.
ಕಾಸರಗೋಡು ಜಿಲ್ಲಾ ಪಂಚಾಯತು ಸದಸ್ಯೆ ಶ್ರೀಮತಿ ಎಂ.ಶೈಲಜಾ ಭಟ್, ಕಾಸರಗೋಡು ಕಂದಾಯ ಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪಾ ಕೆ.ವಿ, ಡಯಟ್ ಕಾಸರಗೋಡಿನ ಪ್ರಾಂಶುಪಾಲ ಕೆ.ರಘುರಾಮ ಭಟ್, ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಎನ್.ನಂದಿಕೇಶನ್, ‘ಕೈಟ್’ ಜಿಲ್ಲಾ ವ್ಯವಸ್ಥಾಪಕ ರಾಜೇಶ್ ಎಂ.ಪಿ, ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಅಬ್ಬಾಸ್ ಎಂ, ಬದಿಯಡ್ಕ ಗ್ರಾಮ ಪಂಚಾಯತು ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ರಶೀದಾ ಹಮೀದ್, ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯೆ ಶ್ರೀಮತಿ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಜಯಶ್ರೀ ಪಿ, ಕುಂಬಳೆ ಬಿಪಿಸಿ ಜಯರಾಮ್ ಜೆ, ಬದಿಯಡ್ಕ ಗ್ರಾಮ ಪಂಚಾಯತು ಪಿಇಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ, ಕುಂಬಳೆ ಉಪಜಿಲ್ಲಾ ಏಕ್ಟಿವಿಟಿ ಕಮಿಟಿಯ ಸಂಚಾಲಕ ಸುರೇಂದ್ರನ್ ಎಂ.ವಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲತಿ.ವೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಎಸ್.ನಾರಾಯಣ ಮತ್ತು ಮೋಹನ್ ಡಿ.ಎನ್ ಕಾರ್ಯಕ್ರಮಕ್ಕೆ ಶುಭಹಾರೈಸಲಿದ್ದಾರೆ. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ಸ್ವಾಗತಿಸಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ್ ಎಂ.ಕೆ ಧನ್ಯವಾದ ಸಮರ್ಪಿಸಲಿದ್ದಾರೆ.
22.10.2022 ಶನಿವಾರ ಅಪರಾಹ್ಣ 3 ಗಂಟೆಗೆ ಜರಗಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ವಹಿಸಲಿದ್ದಾರೆ. ಬದಿಯಡ್ಕ ಪೋಲೀಸ್ ಇನ್ಸ್ಪೆಕ್ಟರ್ ಅಶ್ವಿತ್ ಎಸ್.ಕರಣ್ಮಯಿಲ್, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಮಾತೃ ವಿಭಾಗದ ಅಧ್ಯಕ್ಷರುಗಳಾದ ಗಿರಿಜಾ ಮತ್ತು ಸಿಂಧು ಟಿ ಬಹುಮಾನಗಳನ್ನು ವಿತರಿಸಲಿದ್ದಾರೆ. ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಪ್ರಭಾರ ಪ್ರಾಂಶುಪಾಲ ಎಂ.ಸುಬ್ರಹ್ಮಣ್ಯನ್ ಸ್ವಾಗತಿಸಿ, ಪ್ರೋಗ್ರಾಂ ಕಮಿಟಿಯ ಸಂಚಾಲಕ ಕೆ.ಗೋವಿಂದ ಶರ್ಮ ಧನ್ಯವಾದ ಸಮರ್ಪಿಸಲಿದ್ದಾರೆ.
ನೀವೆಲ್ಲರೂ ಬನ್ನಿ...
ಕೇರಳ ಸರಕಾರದ ವಿದ್ಯಾಭ್ಯಾಸ ಇಲಾಖೆಯು ಕಳೆದ ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದ ಫಲಿತಾಂಶವು ಇದೀಗ ಪ್ರಕಟವಾಗಿದ್ದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ನಾಲ್ಕು ಮಂದಿ ವಿದ್ಯಾರ್ಥಿಗಳು ಉನ್ನತ ಗ್ರೇಡ್ ಪಡೆದು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ ಪಡೆದ ಹಿರಿಮೆಯನ್ನು ಸಾಧಿಸಿದ್ದಾರೆ. ಈ ಮೂಲಕ ಒಟ್ಟು 17 ಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ ಪಡೆದಂತಾಗಿದೆ. ಶ್ರೀಲಕ್ಷ್ಮಿ. ಕೆ, ಕಿಶನ್ ಕುಮಾರ್. ಜಿ, ಸಿದ್ಧಾರ್ಥ್. ಎಸ್ ಮತ್ತು ಶ್ರೀನಿವಾಸ ಶರ್ಮ.ಎನ್ ಇತ್ತೀಚೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಬಂದ ಸಂದರ್ಭದಲ್ಲಿ ಒಂಬತ್ತು ವಿಷಯಗಳಲ್ಲಿ ಮಾತ್ರ ಎ+ ಗ್ರೇಡ್ ಪಡೆದಿದ್ದರು. ಶುಭಾಶಯಗಳು...
ಬೆಂಗಳೂರು
15-02-2021
ನಮ್ಮ
ಮಾತೃ ಶ್ರೀಯವರಾದ ದಿ.
ಕೋಳಾರಿ
ಕೋರಿಕ್ಕಾರು ಕೃಷ್ಣ ಭಟ್ಟರ
ಧರ್ಮಪತ್ನಿ,
ದಿ.
ಶ್ರೀಮತಿ
ಲಕ್ಷ್ಮಿ ಅಮ್ಮನವರು ನಮ್ಮ ನ್ನಗಲಿ
ಇಂದಿಗೆ ಐದು ತಿಂಗಳು.
ಅವರಿಗೆ
ದೊರೆತ ಅತ್ಯಲ್ಪ ಶಾಲಾ ಶಿಕ್ಷಣವನ್ನು
ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯು
ನೀಡಿತ್ತು ಎಂಬುದು ಹೆಮ್ಮೆಯ
ವಿಚಾರವಾಗಿದೆ.
ನಮ್ಮ
ಮಾತೃಶ್ರೀಯವರು ನಮಗೆ ನೀಡಿದ
ಆರಂಭಿಕ ಶಿಕ್ಷಣವೂ ಜೀವನ ಮೌಲ್ಯಗಳೂ
ಅಳತೆಗೆ ನಿಲುಕದಷ್ಟು.
ನಾವು
ಏಳು ಜನ ಮಕ್ಕಳನ್ನು ಬಡತನ ಹಾಗೂ
ಸೌಲಭ್ಯ ರಹಿತ ದಿನಗಳಾದ 1950-80ರ
ದಶಕಗಳಲ್ಲಿ ಸ್ಪೂರ್ತಿ ಮತ್ತು
ಉತ್ಸಾಹಗಳನ್ನು ತುಂಬಿ ಮುನ್ನಡೆಸಿದ
ಅವರ ದಿವ್ಯ ಚೇತನಕ್ಕೆ ನಮ್ಮ
ಅನಂತಾನಂತ ನಮನಗಳು.
1930-40ರ
ದಶಕಗಳಲ್ಲಿ ಹೆಣ್ಣು ಮಕ್ಕಳ
ಶಿಕ್ಷಣವು ಒಂದು ಕನಸಿನ ಮಾತು.
ನಮ್ಮ
ಮಾತಶ್ರೀ ಯವರೂ ಕೂಡಾ
ಶಿಕ್ಷಣ
ವಂಚಿತರಾದ ಆ ಕಾಲದ ಹೆಣ್ಣು
ಮಕ್ಕಳಲ್ಲಿ ಒಬ್ಬರು.
ಅವರ
ಶಾಲಾ ಶಿಕ್ಷಣವು 3ನೇ
ತರಗತಿಯಿಂದ ಆರಂಭವಾಗಿ 6ನೇ
ತರಗತಿಯಲ್ಲಿ ಕೊನೆಗೊಂಡಿತ್ತು.
ತಮ್ಮ
13ನೇ
ವಯಸ್ಸಿನಲ್ಲಿ ವಿವಾಹ ಜೀವನಕ್ಕೆ
ಕಾಲಿರಿಸಿದ ಅವರು ಮತ್ತೆಂದೂ ಯಾವ
ವಿಧವಾದ ವಿದ್ಯಾಭ್ಯಾಸವನ್ನೂ
ಮುಂದುವರಿಸಲಾಗಲಿಲ್ಲ.
ಹೀಗಿದ್ದೂ
ತಮ್ಮ ಮಕ್ಕಳಿಗೆ ಶಿಕ್ಷಣದ
ಮಹತ್ವವನ್ನು ಮನದಟ್ಟು ಮಾಡಿ
ಅವರನ್ನು ಉನ್ನತ ಶಿಕ್ಷಣದತ್ತ
ಮುನ್ನಡೆಸಿದರು.
ತಮ್ಮ
ಮಕ್ಕಳಲ್ಲದೆ ಕುಟುಂಬದ ಹಾಗೂ
ಕುಟುಂಬೇತರ ಮಕ್ಕಳ ವಿದ್ಯಾಭ್ಯಾಸಕ್ಕೂ
ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ
ಸಹಕರಿಸಿದ ಅವರ ದಿವ್ಯಾತ್ಮಕ್ಕೆ
ಒಂದು ಕಿರು ಕಾಣಿಕೆಯಾಗಿ,
ಅವರು
ಕಲಿತ ಶಾಲೆಯಲ್ಲಿ 10ನೇ
ತರಗತಿಯಲ್ಲಿ ಅತೀ ಹೆಚ್ಚು ಅಂಕ
ಗಳಿಸಿದ ವಿದ್ಯಾರ್ಥಿನಿ (ಯರಿ)ಗೆ
ಒಂದು
ನಗದು ಬಹುಮಾನವನ್ನು ಕೊಡಮಾಡಲು
ತೀರ್ಮಾನಿಸಿದ್ದೇವೆ.
ನಮ್ಮ ಅಪೇಕ್ಷೆಯನ್ನು ಅಂಗೀಕರಿಸಿ ಶ್ರೀಮತಿ ಲಕ್ಷ್ಮಿ ಅಮ್ಮ ಸ್ಮಾರಕ ಬಹುಮಾನವನ್ನು ಅನುಷ್ಠಾನಗೊಳಿಸಿದ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಆಡಳಿತ ಮಂಡಳಿ, ಮೂಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದಕ್ಕೆ ನಾವು ಆಭಾರಿಗಳು.
ಈ ಕಾರ್ಯದಲ್ಲಿ ನಮ್ಮ ಪರವಾಗಿ ಅಪೇಕ್ಷೆಯನ್ನು ಮಂಡಿಸಿ ಎಲ್ಲಾ ವಿಧವಾದ ಸಹಕಾರವನ್ನೂ ನೀಡಿದ ನಮ್ಮ ಸೋದರ ಸಂಬಂಧಿ ಮತ್ತು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಅಧ್ಯಾಪಕರೂ ಆಗಿರುವ ಶ್ರೀ ಗೋವಿಂದ ಶರ್ಮ, ಕೋರಿಕ್ಕಾರು ಅವರಿಗೆ ನಮ್ಮೆಲ್ಲರ ಅಕ್ಕರೆಯ ಧನ್ಯವಾದಗಳು.
ಇಂತಿ,
ದಿ.
ಕೋಳಾರಿ
ಕೋರಿಕ್ಕಾರು
ಕೃಷ್ಣ
ಭಟ್ ಮತ್ತು ಶ್ರೀಮತಿ ಲಕ್ಷ್ಮಿ
ಅಮ್ಮ ನವರ ಮಕ್ಕಳ ಪರವಾಗಿ,
ಶ್ರೀಮತಿ
ಡಾ.
ಕೆ.
ಸುಮಂಗಲಾ
ಭಟ್
ಸಂಸ್ಥಾಪಕ
ನಿರ್ದೇಶಕರು
ಡೆಕ್ಟ್ರಾಸ್
ಟೆಕ್ನಾಲಜೀಸ್
ಕೆಂಗೇರಿ,
ಬೆಂಗಳೂರು
-560060.
2019-20 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಈಗಾಗಲೇ ಪ್ರಕಟವಾಗಿದ್ದು ನಮ್ಮ ಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ವಿದ್ಯಾರ್ಥಿನಿ ಮೇಘಶ್ರೀ ವಿ. ಎಸ್ ಮರುಮೌಲ್ಯಮಾಪನದ ಬಳಿಕ ಎಲ್ಲ ವಿಷಯಗಳಲ್ಲಿ ಎ+ ಪಡೆದಿದ್ದಾಳೆ. ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ ಒಂದು ವಿಷಯದಲ್ಲಿ ಹೊರತು ಪಡಿಸಿ ಉಳಿದ ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಳು. ಅರ್ಹವಾಗಿ ದೊರಕಬೇಕಾಗಿದ್ದ ವಿಷಯದಲ್ಲಿ ಎ+ ದೊರಕದೆ ಇದ್ದುದರಿಂದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಮರುಮೌಲ್ಯಮಾಪನದ ಫಲಿತಾಂಶವು ಪ್ರಕಟವಾಗಿದ್ದು ಈ ಮೂಲಕ ನಮ್ಮ ಶಾಲೆಯ ಒಟ್ಟು 20 ಮಂದಿ ಎಲ್ಲ ವಿಷಯಗಳಲ್ಲಿ ಎ+ ಪಡೆದು ಶಾಲೆಯ ಅಭಿಮಾನವನ್ನು ಹೆಚ್ಚಿಸಿದ್ದಾರೆ.
ಮೇಘಶ್ರೀ ವಿ. ಎಸ್ ನಮ್ಮ ಶಾಲೆಯ ನಿವೃತ್ತ ಶಿಕ್ಷಕ ವಜ್ರಾಂಗಿ ಈಶ್ವರ ಭಟ್ಟರ ಮೊಮ್ಮಗಳು. ನಮ್ಮ ಶಾಲೆಯ ಪೂರ್ವ ವಿದ್ಯಾರ್ಥಿ ಸುಬ್ರಹ್ಮಣ್ಯೇಶ್ವರ ಶರ್ಮ.ವಿ ಮತ್ತು ಆಶಾ ಟಿ.ಎಸ್ ದಂಪತಿಯ ಪುತ್ರಿ.
ಅಭಿನಂದನೆಗಳು...