ನಮ್ಮ ಶಾಲೆಯ ಒಂಭತ್ತನೇ ತರಗತಿ
ವಿದ್ಯಾರ್ಥಿನಿ ಸ್ವಾಗತ ರೈ.ಬಿ ಕಳೆದ 20.07.2013 ರಂದು ಅಗಲ್ಪಾಡಿ ಶ್ರೀ
ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ
ಚದುರಂಗ ಸ್ಪರ್ಧೆಯ ಜೂನಿಯರ್ ಹುಡುಗಿಯರ ವಿಭಾಗದಲ್ಲಿ ಚಾಂಪಿಯನ್ಶಿಪ್ ಗಳಿಸಿದ್ದಾಳೆ.
ಈಕೆ ಶಿಕ್ಷಕ ದಂಪತಿಗಳಾದ ಚಂದ್ರಶೇಖರ ರೈ.ಕೆ ಮತ್ತು ಚಂದ್ರಾವತಿ.ಬಿ ಇವರ ಪುತ್ರಿ. ಶುಭಾಶಯಗಳು...
26 July 2013
25 July 2013
19 July 2013
12 July 2013
08 July 2013
ರಕ್ಷಕ ಶಿಕ್ಷಕ ಸಂಘದ ಮಹಾಸಭೆ - 2013
“ನಮ್ಮ ನಾಡಿನ ಅತ್ಯಂತ ಹಳೆಯ ವಿದ್ಯಾಸಂಸ್ಥೆಗಳಲ್ಲಿ ಖ್ಯಾತಿ ಪಡೆದ ಮಹಾಜನ ವಿದ್ಯಾಸಂಸ್ಥೆಗಳ ಶತಮಾನೋತ್ಸವ ಕಾರ್ಯಕ್ರಮಗಳು ಯಶಸ್ವಿಯಾಗಲಿ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೂ ಕೂಡಾ ಚೆನ್ನಾಗಿ ಕಲಿತು ಉತ್ತಮ ಫಲಿತಾಂಶ ಪಡೆದು ಹೆತ್ತವರ, ಸಮಾಜದ ಗೌರವಕ್ಕೆ ಪಾತ್ರರಾಗಲಿ" ಎಂದು ನಮ್ಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ರಕ್ಷಕ ಶಿಕ್ಷಕ ಸಂಘದ ಮಾತೃ ವಿಭಾಗದ ಅಧ್ಯಕ್ಷೆ ಅನ್ನಪೂರ್ಣ ಕುಳಮರ್ವ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವರದಿ ವಾಚಿಸಿದರು. ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ ಸ್ವಾಗತಿಸಿ ಕೆ.ನಾರಾಯಣ ಭಟ್ ವಂದಿಸಿದರು.
Subscribe to:
Posts (Atom)