Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

10 December 2013

ಇಸ್ರೋ ಅಧ್ಯಕ್ಷರಿಂದ ‘ಶತಮಾನೋತ್ಸವ ಸೌಧ’ದ ಲೋಕಾರ್ಪಣೆ, ನೀವೂ ಬನ್ನಿ...


         ನಮ್ಮ ಶಾಲೆಗಳ  ಶತಮಾನೋತ್ಸವಕ್ಕೆ ಭರದ ಸಿದ್ಧತೆ ಆರಂಭವಾಗಿದೆ. ಶತಮಾನೋತ್ಸವ ಸೌಧ ಮತ್ತು ವಿಶಾಲ ಸಭಾಂಗಣದ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದೆ. ಮಳೆಗಾಲದಲ್ಲೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮುಕ್ತವಾಗಿ ವೇದಿಕೆಯಾಗಬಲ್ಲ ವಿಶಾಲ ಸಭಾಂಗಣದ ಚಾವಣಿಯ ಕಾಮಗಾರಿ ಆರಂಭವಾಗಿದೆ. ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಭಾಂಗಣವನ್ನು ಮಂಗಳಯಾನದ ಹರಿಕಾರ, ಇಸ್ರೋ ಅಧ್ಯಕ್ಷ ಡಾ| ಕೆ.ರಾಧಾಕೃಷ್ಣನ್ ನಿರ್ವಹಿಸಲಿದ್ದಾರೆ. ದಶಂಬರ 20, ಶುಕ್ರವಾರದಂದು ಆರಂಭವಾಗುವ ಸಭಾ ಕಾರ್ಯಕ್ರಮಗಳು ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ 22 ನೇ ತಾರೀಕು ಭಾನುವಾರದ ತನಕ ಮುಂದುವರಿಯಲಿವೆ.

ದಶಂಬರ 20, ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಶತಮಾನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ನೆಲ್ಲಿಕುನ್ನು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಅಡ್ವಕೇಟ್ ಶ್ಯಾಮಲಾದೇವಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಸರಗೋಡು ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಅಡ್ವಕೇಟ್ ಮುಮ್ತಾಜ್ ಶುಕೂರ್, ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಧಾ ಜಯರಾಂ, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪ್ರಮೀಳ ಸಿ.ನಾಯಕ್, ಕಾಸರಗೋಡು ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ರಜನಿ, ಬದಿಯಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕೆ.ಯನ್. ಕೃಷ್ಣ ಭಟ್, ಬದಿಯಡ್ಕ ಗ್ರಾಮ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಮಾಹಿನ್ ಕೇಳೋಟ್, ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ ಗೋಳಿಯಡ್ಕ, ಶ್ರೀಮತಿ ಶೀಲಾ ಕೆ.ಯನ್. ಭಟ್, ಮಹೇಶ ವಳಕ್ಕುಂಜ, ಮಂಜುನಾಥ ಮಾನ್ಯ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸೌಮ್ಯ ಮಹೇಶ್ ಉದ್ಘಾಟಿಸಲಿದ್ದಾರೆ. ಅಪರಾಹ್ಣ 2 ರಿಂದ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ಜರಗಲಿವೆ.

ದಶಂಬರ 20, ಶುಕ್ರವಾರ ಅಪರಾಹ್ಣ 4 ಗಂಟೆಗೆ ’ಶತಮಾನೋತ್ಸವ ಸೌಧ’ದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀ ಎಡನೀರು ಮಠದ ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ಇಸ್ರೋ ಅಧ್ಯಕ್ಷ ಡಾ| ಕೆ.ರಾಧಾಕೃಷ್ಣನ್ ಶತಮಾನೋತ್ಸವ ಸೌಧವನ್ನು ಉದ್ಘಾಟಿಸುವರು. ಚೆನ್ನೈಯ ಅಪಲೋ ಹೋಸ್ಪಿಟಲ್ಸ್ ಎಂಟರ್‌ಪ್ರೈಸ್ ಲಿ. ನ ಆಡಳಿತ ನಿರ್ದೇಶಕಿ ಶ್ರೀಮತಿ ಪ್ರೀತಾ ರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಯಂಬತ್ತೂರು ಆರ್ಯವೈದ್ಯ ಫಾರ್ಮಸಿಯ ಆಡಳಿತ ನಿರ್ದೇಶಕ, ‘ಪದ್ಮಶ್ರೀ’ ಪ್ರಶಸ್ತಿ ವಿಜೇತ ಕೆ. ಕೃಷ್ಣಕುಮಾರ್, ಕೇರಳ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಎಂ. ಶರೀಫ್, ಬದಿಯಡ್ಕದ ಉದ್ಯಮಿ ಬಿ. ವಸಂತ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ‘ಶತಮಾನ ಪ್ರಭಾ’ ಸ್ಮರಣ ಸಂಚಿಕೆಯ ಬಿಡುಗಡೆ ಹಾಗೂ ಶಾಲಾ ಹಳೆ ವಿದ್ಯಾರ್ಥಿ, ಪ್ರಖ್ಯಾತ ಜ್ಯೋತಿಷಿ ಬೇಳ ಪದ್ಮನಾಭ ಶರ್ಮಾ, ಇರಿಂಞಲಕುಡ ಇವರಿಗೆ ಸನ್ಮಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಸಂಜೆ 7 ಗಂಟೆಯಿಂದ ನಾಟ್ಯಗುರು ಬಾಲಕೃಷ್ಣ ಮಂಜೇಶ್ವರ ಇವರ ಶಿಷ್ಯೆಯರ ಭರತನಾಟ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

          ದಶಂಬರ 21, ಶನಿವಾರ ಬೆಳಗ್ಗೆ 10ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ಪ್ರಾರಂಭವಾಗುವುದು. 11.30ರಿಂದ ಶಾಲಾ ಹಳೆ ವಿದ್ಯಾರ್ಥಿಗಳು ‘ಯಕ್ಷಗಾನ ತಾಳಮದ್ದಳೆ’ಯನ್ನು ಪ್ರಸ್ತುತಪಡಿಸಲಿದ್ದಾರೆ. ಅಪರಾಹ್ನ 3 ಗಂಟೆಗೆ ‘ಶೈಕ್ಷಣಿಕ ಸಂಗಮ-ವರ್ಧಂತ್ಯುತ್ಸವ’ ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲಾಧಿಕಾರಿ ಪಿ.ಯಸ್. ಮಹಮ್ಮದ್ ಸಗೀರ್ ಉದ್ಘಾಟಿಸಲಿದ್ದಾರೆ. ಕಾಸರಗೋಡು ಡಿಡಿಇ (ಇನ್‌ಚಾರ್ಜ್) ಬಿ. ಜಯಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ಐ. ಸತ್ಯನಾರಾಯಣ ಭಟ್ ಬಹುಮಾನ ವಿತರಣೆ  ನಡೆಸುವರು. ಈ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತು ಆರೋಗ್ಯ ವಿದ್ಯಾಭ್ಯಾಸ ಸ್ಥಾಯೀಸಮಿತಿ ಅಧ್ಯಕ್ಷೆ ಶ್ರೀಮತಿ ಸುಜಾತ, ಕಾಸರಗೋಡು ಬ್ಲೋಕ್ ಪಂಚಾಯತು ಆರೋಗ್ಯ ವಿದ್ಯಾಭ್ಯಾಸ ಸ್ಥಾಯೀಸಮಿತಿ ಅಧ್ಯಕ್ಷೆ ಶ್ರೀಮತಿ ತಸ್ಲಿಮಾ ಹ್ಯಾರಿಸ್, ಬದಿಯಡ್ಕ ಗ್ರಾಮ ಪಂಚಾಯತು ಆರೋಗ್ಯ ವಿದ್ಯಾಭ್ಯಾಸ ಸ್ಥಾಯೀಸಮಿತಿ ಅಧ್ಯಕ್ಷೆ ಶ್ರೀಮತಿ ಸಮೀರಾ  ಇಬ್ರಾಹಿಂ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಇಬ್ರಾಹಿಂ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ವಿನಯಾ.ಕೆ ವಿರಚಿತ ಕವನ ಸಂಕಲನವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಗುವುದು. ಸಂಜೆ 5ರಿಂದ ವಿವಿಧ ವಿನೋದಾವಳಿಗಳು ಮತ್ತು ಶ್ರೀ ಗೋಪಾಲಕೃಷ್ಣ ಬೊಂಬೆಯಾಟ ಸಂಘ ಕಾಸರಗೋಡು ಇವರಿಂದ ಯಕ್ಷಗಾನ ಬೊಂಬೆಯಾಟ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ದಶಂಬರ 22, ಭಾನುವಾರ ಬೆಳಗ್ಗೆ 10 ರಿಂದ ಪೂರ್ವ ಅಧ್ಯಾಪಕ ವಿದ್ಯಾರ್ಥಿ ಸಂಗಮದ ಅಂಗವಾಗಿ ‘ಗುರುವಂದನೆ’ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ಡಿ. ಸದಾಶಿವ ಭಟ್ ವಹಿಸಲಿದ್ದಾರೆ. ಬ್ರಹ್ಮಶ್ರೀ ವೇ|ಮೂ| ಮಾಧವ ಉಪಾಧ್ಯಾಯ ಬಳ್ಳಪದವು, ಖ್ಯಾತ ಚಿತ್ರಕಲಾವಿದ ಪಿ.ಯಸ್. ಪುಣಿಂಚತ್ತಾಯ, ಕಾಸರಗೋಡು ತಹಶೀಲ್ದಾರರಾದ ಕೆ. ಶಿವಕುಮಾರ್, ಮಂಗಳೂರು ಎಂಸಿಎಫ್ ಜನರಲ್ ಮೇನೇಜರ್ ಪಿ. ಜಯಶಂಕರ ರೈ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11.30ರಿಂದ ಹಳೆ ವಿದ್ಯಾರ್ಥಿನಿ ಧನ್ಯಶ್ರೀ ಹಳೆಮನೆ ಇವರಿಂದ ಭಾವಗೀತೆ ಮತ್ತು ಕಾಕುಂಜೆ ಸಹೋದರಿಯರಾದ ಹೇಮಶ್ರೀ-ಶ್ರೀವಾಣಿ ಇವರಿಂದ ಶಾಸ್ತ್ರೀಯ ಸಂಗೀತ ಗಾಯನ ಜರಗಲಿರುವುದು.

        ಅಪರಾಹ್ನ 4ರಿಂದ ಆರಂಭವಾಗುವ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಟಿವಿಎಸ್ ಮೋಟರ್ ಕಂಪೆನಿಯ ಅಧ್ಯಕ್ಷ ಕೆ.ಯನ್. ರಾಧಾಕೃಷ್ಣನ್ ಉದ್ಘಾಟಿಸಲಿದ್ದಾರೆ.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯ ಆಡಳಿತ ಮೊಕ್ತೇಸರರಾದ ಯು.ಟಿ. ಆಳ್ವ ವಹಿಸಲಿದ್ದಾರೆ. ಪ್ರಶಸ್ತಿ ವಿಜೇತ ಮಲಯಾಳಂ ಚಿತ್ರ ನಟಿ ಕಾವ್ಯಾ ಮಾಧವನ್, ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಅನಂತಕೃಷ್ಣ, ಜ್ಯೋತಿಷಿ ಬೇಳ ಪದ್ಮನಾಭ ಶರ್ಮಾ, ಬಜ್ಪೆಯ ಕಾಮತ್ ಕಾಶ್ಯೂ ಕಂಪೆನಿ ಮಾಲಕ ಸೇವಗೂರು ಉಮೇಶ್ ಕಾಮತ್ ಇವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಖ್ಯಾತ ಕವಿ ನಾಡೋಜ ಡಾ| ಕಯ್ಯಾರ ಕಿಂಞಣ್ಣ ರೈ ಮತ್ತು ವಿಶ್ವವಿಖ್ಯಾತ ಬೊಂಬೆಯಾಟ ಕಲಾವಿದರಾದ ಕೆ.ವಿ.ರಮೇಶ್ ಇವರಿಗೆ ಸನ್ಮಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಸಂಜೆ 7 ರಿಂದ  ವಿವಿಧ ವಿನೋದಾವಳಿಗಳು ಮತ್ತು ಅಧ್ಯಾಪಕರು ಹಾಗೂ ಹಳೆ ವಿದ್ಯಾರ್ಥಿಗಳ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟವನ್ನೂ ಏರ್ಪಡಿಸಲಾಗಿದೆ.

      ನೀವೂ ಬನ್ನಿ, ನಿಮ್ಮವರನ್ನೂ ಕರೆತನ್ನಿ...

No comments:

Post a Comment