Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

20 December 2013

ಧ್ವಜಾರೋಹಣದೊಂದಿಗೆ ಶತಮಾನೋತ್ಸವಕ್ಕೆ ಚಾಲನೆ




ಗ್ರಾಮ್ಯ ವಾತಾವರಣದ ಪೆರಡಾಲದಿಂದ ಬೆಳೆಯುತ್ತಾ ಬಂದು ನೀರ್ಚಾಲಿಗೆ ಸೇರಿದ ಮಹಾಜನ ಸಂಸ್ಕೃತ ಕಾಲೇಜು, ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ಶತಮಾನೋತ್ಸವಕ್ಕೆ ನೀರ್ಚಾಲು ಶೃಂಗಾರದಿಂದ ಸಜ್ಜುಗೊಂಡಿದೆ. ಬಿದಿರಿನಿಂದ ರಚಿಸಿದ ಆಕರ್ಷಕ ಸ್ವಾಗತ ಕಮಾನು, ವೇದಿಕೆ, ಚಪ್ಪರ ವಿದ್ಯಾಭಿಮಾನಿಗಳ ಸಂಭ್ರಮದ ಸಾಕ್ಷಿಗಳಾಗಿವೆ. ಇಂದು ದಶಂಬರ 20ರಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಖಂಡಿಗೆ ಮನೆತನದ ಹಿರಿಯರಾದ ಗೋವಿಂದ ಭಟ್ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್, ಖ್ಯಾತ ಜ್ಯೋತಿಷಿ ಬೇಳ ಪದ್ಮನಾಭ ಶರ್ಮ ಇರಿಞ್ಞಾಲಕ್ಕುಡ, ಮಹಾಜನ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಡಾ|ಸುಬ್ರಹ್ಮಣ್ಯ ಭಟ್ ಖಂಡಿಗೆ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ, ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಎಂ.ಸೂರ್ಯನಾರಾಯಣ ಕಾರ್ಯಕ್ರಮ ನಿರ್ವಹಿಸಿದರು. ಇನ್ನು ಈ ದಿವಸಗಳಲ್ಲಿ ವಿದ್ವಾಂಸರ ಗೋಷ್ಟಿ, ಉಪಸ್ಥಿತಿ, ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆಯಲಿವೆ.

No comments:

Post a Comment