“ಕೃಷ್ಣ ಎಂದರೆ ಸೆಳೆತ, ಸಂಭ್ರಮ, ಸಂತೋಷ, ಆತ್ಮೀಯತೆ, ನಮ್ಮವನೆಂಬ ವ್ಯಾಮೋಹ. ಕೃಷ್ಣನ ಹೆಸರು ಅನುಪಮ ಆನಂದದ ಅನುಭವ. ಅವನ ವ್ಯಕ್ತಿತ್ವ ಅನುಪಮ, ಆದರ್ಶ. ಲೋಕಕಲ್ಯಾಣಕ್ಕಾಗಿ ಅವತಾರವೆತ್ತಿದ ಮಹಾಪುರುಷರ ಜನ್ಮದಿನದ ಆಚರಣೆ ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ತಂದುಕೊಡುತ್ತದೆ” ಎಂದು ನಿವೃತ್ತ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಅಭಿಪ್ರಾಯಪಟ್ಟರು. ಅವರು ಇಂದು ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ‘ವಿದ್ಯೋದಯ ಸಭಾ’ ಆಶ್ರಯದಲ್ಲಿ ನಮ್ಮ ಶಾಲೆಯಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕಿರಿಯ ಪ್ರಾಥಮಿಕ ಶಾಲಾ
ಮುಖ್ಯೋಪಾಧ್ಯಾಯ ಪಿ. ಗೋವಿಂದ ಭಟ್ ಉಪಸ್ಥಿತರಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ ಉಪನಾಯಕಿ
ರಮ್ಯಾ.ಕೆ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯದೇವ ಖಂಡಿಗೆ ಸ್ವಾಗತಿಸಿ,
ಪ್ರೌಢಶಾಲಾ
ಮುಖ್ಯೋಪಾಧ್ಯಾಯ ಸಿ.ಎಚ್.ಸುಬ್ರಹ್ಮಣ್ಯ ಭಟ್ ವಂದಿಸಿದರು. ಕಾರ್ಯಕ್ರಮದ ಸಂಚಾಲಕಿ ವಾಣಿ.ಪಿ.ಎಸ್
ಕಾರ್ಯಕ್ರಮ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ
ಅಂಗವಾಗಿ ಮೋಹನ ನೀರ್ಚಾಲು, ಗಣೇಶ್ ನೀರ್ಚಾಲು, ಮನಮೋಹನ ಸೂರಂಬೈಲು ಇವರಿಂದ ‘ಭಕ್ತಿಗಾನ ಸುಧಾ’ ಕಾರ್ಯಕ್ರಮ ಜರಗಿತು. ಹಾರ್ಮೋನಿಯಂನಲ್ಲಿ ಶಿವಾನಂದ ಮಾಯಿಪ್ಪಾಡಿ, ತಬ್ಲಾದಲ್ಲಿ ಅಚ್ಯುತಾನಂದ
ಕೂಡ್ಲು ಮತ್ತು ಮೌನೇಶ್ ನೀರ್ಚಾಲು ಸಹಕರಿಸಿದರು.
No comments:
Post a Comment