Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

22 August 2014

ಹೈಯರ್ ಸೆಕೆಂಡರಿ - ಕನ್ನಡಕ್ಕೆ ಅನುಮತಿ


                ಶತಮಾನೋತ್ಸವ ಸಂದರ್ಭದಲ್ಲಿ ಜನಪ್ರತಿನಿಧಿಗಳು ನೀಡಿದ ಆಶ್ವಾಸನೆಯಂತೆ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಗೆ ಹೈಯರ್ ಸೆಕೆಂಡರಿ ವಿಭಾಗವನ್ನು ತೆರೆಯಲು ಅನುಮತಿ ನೀಡಿ ಕೇರಳ ಸರಕಾರ ಆದೇಶ ಹೊರಡಿಸಿದೆ. ಮೊದಲು ನೀಡಿದ ಆದೇಶದಲ್ಲಿ ಸರಕಾರವು ಭಾಷಾ ಕಲಿಕೆಗಾಗಿ ಮಲಯಾಳವನ್ನು ಸೂಚಿಸಿತ್ತು. ಆದರೆ ವಿದ್ಯಾರ್ಥಿಗಳ, ಹಿತೈಷಿಗಳ ಮತ್ತು ಶಾಲಾ ಆಡಳಿತ ಮಂಡಳಿಯ ಬೇಡಿಕೆಯನ್ನು ಗಮನಿಸಿ 21.08.2014 ರಂದು ಕೇರಳ ಸರಕಾರವು ಮಲಯಾಳದ ಬದಲು ಕನ್ನಡ ತರಗತಿಗಳನ್ನು ಆರಂಭಿಸಲು ಸೂಚಿಸಿದೆ. ಆದೇಶದ ಪ್ರಕಾರ ಇಂಗ್ಲಿಷ್, ಕನ್ನಡ ಭಾಷೆಗಳ ಹೊರತಾಗಿ ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ (ಪಿಸಿಎಂಬಿ) ತರಗತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯಲ್ಲಿ 23.08.2014 ರಂದು ಅಪರಾಹ್ನ 4 ಗಂಟೆಯ ಮೊದಲು ಶಾಲಾ ಕಛೇರಿಯಲ್ಲಿ ಅರ್ಜಿಗಳನ್ನು ಸಮರ್ಪಿಸಬಹುದಾಗಿದೆ.
                ಶಾಲೆಯ ಬೇಡಿಕೆಯನ್ನು ಮನ್ನಿಸಿ ಹೈಯರ್ ಸೆಕೆಂಡರಿ ವಿಭಾಗವನ್ನು ತೆರೆಯಲು ಮತ್ತು ಸೂಕ್ತ ಕೋರ್ಸುಗಳಿಗೆ ಅನುಮತಿ ನೀಡಿ ಸರಕಾರವು ಆದೇಶವನ್ನು ಹೊರಡಿಸಲು ಪ್ರಯತ್ನಿಸಿದ ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್..ನೆಲ್ಲಿಕುನ್ನು, ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ ಪಕ್ಷಗಳ ಪ್ರತಿನಿಧಿಗಳು ಮತ್ತು ಎಲ್ಲ ಹಿತೈಷಿಗಳಿಗೆ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

No comments:

Post a Comment