Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

30 July 2014

ರಕ್ಷಕ ಶಿಕ್ಷಕ ಸಂಘದ ಮಹಾಸಭೆ

“ಶಾಲೆಯ ಶತಮಾನೋತ್ಸವವು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಸಭಾಭವನದ ನಿರ್ಮಾಣ ಕಾಮಗಾರಿ ಕೊನೆಯ ಹಂತದಲ್ಲಿದೆ. ಈ ಸುಸಂದರ್ಭದಲ್ಲಿ ನಮ್ಮ ಶಾಲೆಯಲ್ಲಿ ಹೈಯರ್ ಸೆಕೆಂಡರಿ ವಿಭಾಗವನ್ನು ಆರಂಭಿಸುವ ಕುರಿತು ಸರಕಾರದಿಂದ ಸೂಚನೆ ದೊರೆಯುವ ನಿರೀಕ್ಷೆ ಇದೆ. ಶತಮಾನೋತ್ಸವದ ಯಶಸ್ಸಿಗೆ ಸಹಕರಿಸಿದ ಎಲ್ಲರೂ ಮುಂದೆಯೂ ಶಾಲೆಯ ಪ್ರಗತಿಗೆ ಸಕ್ರಿಯ ಸಹಕಾರ ನೀಡಬೇಕು" ಎಂದು ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಅಭಿಪ್ರಾಯಪಟ್ಟರು. ಅವರು 18.07.2014 ಶುಕ್ರವಾರ ನಮ್ಮ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಂಗೋಳಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್ ನಿಡುಗಳ, ರಕ್ಷಕ ಶಿಕ್ಷಕ ಸಂಘದ ಮಾತೃ ವಿಭಾಗದ ಅಧ್ಯಕ್ಷೆ ಚಂದ್ರಿಕಾ ಮುಂಡಿತ್ತಡ್ಕ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ಸುಬ್ರಹ್ಮಣ್ಯ ಭಟ್ ವರದಿ ವಾಚಿಸಿದರು. ಶಿಕ್ಷಕರಾದ ಕೆ.ನಾರಾಯಣ ಭಟ್ ಸ್ವಾಗತಿಸಿ ಸಿ.ಎಚ್.ವೆಂಕಟರಾಜ ವಂದಿಸಿದರು.

11 July 2014

ಶೇಖರಕಾನ - 2014

ನಮ್ಮ ಶಾಲೆಯ ವಿದ್ಯಾರ್ಥಿಗಳು ಇಂದು ನೀರ್ಚಾಲು ಸನಿಹದ ಶೇಖರಕಾನ ಜಲಪಾತವನ್ನು ಸಂದರ್ಶಿಸಿದರು.