Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

28 July 2017

ರಕ್ಷಕ ಶಿಕ್ಷಕ ಸಂಘದ ಮಹಾಸಭೆ


“ವಿವಿಧ ರೋಗಗಳ ಹರಡುವಿಕೆಯನ್ನು ನಿಯಂತ್ರಿಸಲು ರೋಗಗಳನ್ನು ತಡೆಗಟ್ಟುವ ಚುಚ್ಚುಮದ್ದುಗಳನ್ನು ಮಕ್ಕಳಿಗೆ ಸಕಾಲದಲ್ಲಿ ನೀಡಬೇಕಾಗುವುದು ಅಗತ್ಯ. ಈ ಬಗ್ಗೆ ಕೇಂದ್ರ ಸರಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸದ್ಯದಲ್ಲಿಯೇ ಮಕ್ಕಳಿಗೆ ಎಂ.ಆರ್ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಲಾಗುವುದು. ಈ ಮಹತ್ತರ ಯೋಜನೆಗೆ ಎಲ್ಲ ರಕ್ಷಕರು ಸಹಕಾರ ನೀಡಿ, ಈ ರೋಗಗಳನ್ನು ನಿರ್ಮೂಲನಗೊಳಿಸಲು ಪ್ರಯತ್ನಿಸಬೇಕು" ಎಂದು ಬದಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ಲಲಿತಾ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಂಗೋಳಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇರಳ ಸರಕಾರದ ಅಬಕಾರಿ ಇಲಾಖೆಯ ವಿಜಯನ್ ಪಿ.ಎಸ್ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ವ್ಯಸನದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಎಸ್. ನಾರಾಯಣ ಇವರನ್ನು ಆಯ್ಕೆ ಮಾಡಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಸ್ವಾಗತಿಸಿ ವರದಿ ವಾಚಿಸಿದರು. ಹಿರಿಯ ಶಿಕ್ಷಕಿ ಕೆ.ವಿನೋದಿನಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ್.ಎಂ.ಕೆ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment